Book of #Matthew | #Bible_Study | #Matthew 2:9-15 | #Kannada | Bro.Stephen

ಅವರು ಅರಸನ ಮಾತನ್ನು ಕೇಳಿ ಹೊರಟಾಗ ಮೂಡಣದೇಶದಲ್ಲಿ ಕಂಡ ನಕ್ಷತ್ರವು ಅವರ ಮುಂದೆ ಮುಂದೆ ನಡೆದು ಕೂಸು ಇದ್ದ ಸ್ಥಳದ ಮೇಲೆ ಬಂದು ನಿಂತಿತು. ಅವರು ನಕ್ಷತ್ರವನ್ನು ಕಂಡು ಅತ್ಯಂತ ಸಂತೋಷಪಟ್ಟರು. ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು. ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು. ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು. ಆಗ ಅವನು ಎದ್ದು ಕೂಸನ್ನೂ ಅದರ ತಾಯಿಯನ್ನೂ ರಾತ್ರಿವೇಳೆಯಲ್ಲಿ ಕರಕೊಂಡು ಐಗುಪ್ತದೇಶಕ್ಕೆ ಹೊರಟುಹೋಗಿ ಹೆರೋದನು ತೀರಿಹೋಗುವ ತನಕ ಅಲ್ಲೇ ಇದ್ದನು. ಇದರಿಂದ - ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.

ಮತ್ತಾಯ 2:9‭-‬15